ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

0

ಪುತ್ತೂರು: 2025-26ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯ ಸಲುವಾಗಿ ಜೂ.25ರಂದು ಚುನಾವಣೆ ನಡೆಯಿತು.


ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಅಭಿಷೇಕ್ ಹರ್ಷ ಪಿ.ಜೆ., ಕಾರ‍್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಸನಿಕ ಪಿ. ರೈ, ಜೊತೆ ಕಾರ‍್ಯದರ್ಶಿಯಾಗಿ ಪ್ರಥಮ ವಿಜ್ಞಾನ ವಿಭಾಗದ ಸಿಂಧು ಚುನಾಯಿತರಾದರು. ಕ್ರೀಡಾ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಸಾತ್ವಿಕ್ ಹೆಚ್.ಕೆ., ಕಾರ‍್ಯದರ್ಶಿಯಾಗಿ ದ್ವಿತೀಯ ವಿಜ್ಞಾನ ವಿಭಾಗದ ಪ್ರತೀಕ್ಷಾ ಆಯ್ಕೆಯಾದರು.


ಈ ಪ್ರಕ್ರಿಯೆಯನ್ನು ನರೇಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನಭಾಗ್ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಉಪನ್ಯಾಸಕರಾದ ಕಾರ್ತಿಕ್ ಕುಮಾರ್‌ಎನ್., ಮಧುರಾ, ರುಚಿತಾಕೃಷ್ಣ, ರೇಖಾ ಇವರು ನಡೆಸಿಕೊಟ್ಟರು. ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.


ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಶುಭಹಾರೈಸಿ, ಸರಿಯಾದ ಮಾರ್ಗದರ್ಶನ ಪಡೆದುಕೊಳ್ಳುತ್ತಾ, ಸಂಸ್ಥೆಯ ಏಳಿಗೆಗೆ ಪೂರಕವಾಗಿ ನಡೆದುಕೊಂಡು ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಮುಂದುವರಿಯಬೇಕು ಎಂದು ಹೇಳಿದರು.

LEAVE A REPLY

Please enter your comment!
Please enter your name here