ಕಾಣಿಯೂರು ಕಣ್ವರ್ಷಿ ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ- ಪದಗ್ರಹಣ ಸಮಾರಂಭ

0

ಅಧ್ಯಕ್ಷ ಗಣೇಶ್ ಬೆದ್ರಾಜೆ, ಕಾರ್ಯದರ್ಶಿ ದಿನೇಶ್ ಕೋಡಂದೂರು

ಕಾಣಿಯೂರು: ಕಾಣಿಯೂರು ಕಣ್ವರ್ಷಿ ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಂಘದ ಮಾಜಿ ಅಧ್ಯಕ್ಷ ಮಾಧವ ಕೋಲ್ಪೆ ಅವರ ಅಧ್ಯಕ್ಷತೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಸಂಘದ ನೂತನ ಅಧ್ಯಕ್ಷರಾಗಿ ಗಣೇಶ್ ಬೆದ್ರಾಜೆ, ಕಾರ್ಯದರ್ಶಿಯಾಗಿ ದಿನೇಶ್ ಕೋಡಂದೂರು ಆಯ್ಕೆಯಾಗಿದ್ದಾರೆ.


ಉಪಾಧ್ಯಕ್ಷರಾಗಿ ನವಿತ್ ಎರ್ಬೋಳು, ಕೋಶಾಧಿಕಾರಿಯಾಗಿ ನಾಸಿರ್ ಅಬೀರ, ಜತೆ ಕಾರ್ಯದರ್ಶಿಯಾಗಿ ಕುಸುಮಾಧರ ಕೋಲ್ಪೆ ಅವರನ್ನು ಆಯ್ಕೆ ಮಾಡಲಾಗಿದೆ.

ಪದಗ್ರಹಣ ಸಮಾರಂಭ
ಕಾಣಿಯೂರು ಕಣ್ವರ್ಷಿ ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸಂಘದ ಮಾಜಿ ಅಧ್ಯಕ್ಷ ಮಾಧವ ಕೋಲ್ಪೆ ಅವರ ಅಧ್ಯಕ್ಷತೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು. ಸಂಘದ ಗೌರವಾಧ್ಯಕ್ಷ ಗಣೇಶ್ ಉದನಡ್ಕ, ಗೌರವ ಸಲಹೆಗಾರ ಪರಮೇಶ್ವರ ಅನಿಲ ಹಾಗೂ ಸಂಘದ ನಿಕಟ ಪೂರ್ವ ಪದಾಧಿಕಾರಿಗಳು, ನೂತನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸಂಘದ ಮಾಜಿ ಕಾರ್ಯದರ್ಶಿ ಆನಂದ ಪೂಜಾರಿ ಗಾಳಿಬೆಟ್ಟು ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here