ನರೇಗಾ ಯೋಜನೆಯಡಿ ಗುರಿ ಮೀರಿದ ಸಾಧನೆ- ಸವಣೂರು ಗ್ರಾ.ಪಂ. ಗೆ ಪ್ರಶಂಸನಾ ಪತ್ರ ನೀಡಿ ಗೌರವ

0

ಸವಣೂರು: 2024-25ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಗುರಿ ಮೀರಿದ ಸಾಧನೆ ಮಾಡಿ ಕಡಬ ತಾಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದ ಸವಣೂರು ಗ್ರಾಮ ಪಂಚಾಯತ್ ಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದೆ.

ನರೇಗಾ ಯೋಜನೆಯಡಿ 2024-25ನೇ ಸಾಲಿನ ಕಡಬ ತಾಲೂಕಿನಲ್ಲಿ 7275 ಮಾನವ ದಿನಗಳನ್ನು ಸೃಜಿಸುವ ಮೂಲಕ 175% ಗುರಿ ಮೀರಿ ಸಾಧನೆ ಮಾಡಿ ದ್ವಿತೀಯ ಸ್ಥಾನದಲ್ಲಿ ಗುರುತಿಸಿಕೊಂಡಿದೆ.


ಕಡಬ ತಾಲೂಕು ಪಂಚಾಯತ್ ನಲ್ಲಿ ಜೂ 24ರಂದು ನಡೆದ ಸಭೆಯಲ್ಲಿ ಸವಣೂರು ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತ ಶೆಟ್ಟಿ, ಸಿಬ್ಬಂದಿಗಳಾದ ದಯಾನಂದ ,ಪ್ರಮೋದಚ ಕುಮಾರ್ ರೈ ,ಯತೀಶ್ ಕುಮಾರ್ ಅವರು ಪ್ರಶಂಸನಾ ಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸಂದೇಶ್ ಯಶವಂತ್ ಬೆಳ್ಚಡ, ತಾಲೂಕು ಪಂಚಾಯತ್ ಸಿಬ್ಬಂದಿಗಳು, ಎನ್ ಆರ್ ಜಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here