ಪುತ್ತೂರು: ಮಗುವಿನ ಸರ್ವಾಂಗೀಣ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆಗಳು ಅವಶ್ಯಕ ಎಂದು ಶಾಲಾ ಎಸ್ಡಿಎಂಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು ಹೇಳಿದರು.
ಮುಂಡೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶೇಷ ಸಾಂಸ್ಕೃತಿಕ ತರಗತಿಗಳ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸುಷ್ಮಾ ಶೆಟ್ಟಿ ಮಾನಸ ಕಂಪ ಅವರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಶಾಲಾ ಯಕ್ಷಗಾನ ಶಿಕ್ಷಕರಾದ ಉತ್ತಮ ಪಡ್ಪು, ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡ ಸಾಧಕಿ ಶಾಲಾ ಭರತನಾಟ್ಯ ಶಿಕ್ಷಕಿ ಸಂಧ್ಯಾ ಗಣೇಶ್ ಹಾಗೂ ಚಿತ್ರಕಲಾ ಶಿಕ್ಷಕ ಶಿವ ಸುಬ್ರಹ್ಮಣ್ಯ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ನಾಮನಿರ್ದೇಶಿತ ಸದಸ್ಯ ಉಮೇಶ್ ಅಂಬಟ, ಹಾಗೂ ಉಪಾಧ್ಯಕ್ಷೆ ಜ್ಯೋತಿ ಉಪಸ್ಥಿತರಿದ್ದರು.
ಶಾಲಾ ಮುಖ್ಯಗುರು ವಿಜಯ ಪಿ ಪ್ರಾಸ್ತಾವಿಕ ಮಾತುಗಳ ಮೂಲಕ ಸ್ವಾಗತಿಸಿದರು. ಶಿಕ್ಷಕಿ ಅನ್ನಪೂರ್ಣ ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕ ರವೀಂದ್ರ ಶಾಸ್ತ್ರಿ ವಂದಿಸಿದರು. ದೈ.ಶಿ.ಶಿಕ್ಷಕಿ ವನಿತಾ ಬಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.