ಅರಂತೋಡು: ಬಸ್ಸುಗಳ ಡಿಕ್ಕಿ- ಓರ್ವ ಮಹಿಳೆ ಮೃತ್ಯು- ಹಲವರಿಗೆ ಗಾಯ

0

ಪುತ್ತೂರು: ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ನಡುವೆ ಅಪಘಾತ ಸಂಭವಿಸಿದ ಘಟನೆ ಸುಳ್ಯ ತಾಲೂಕಿನ ಅರಂತೋಡು ಸಮೀಪ ನಡೆದಿದೆ.

ಅರಂತೋಡು ಸಮೀಪ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಮಧ್ಯೆ ಅಪಘಾತವಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಜೂ.25 ರಂದು ಸಂಜೆ ನಡೆದಿದೆ.

ಅಪಘಾತದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದ್ದು, ಗಾಯಗೊಂಡ ಪ್ರಯಾಣಿಕರನ್ನು ಆಂಬ್ಯುಲೆನ್ಸ್ ಮೂಲಕ ಮತ್ತು ಸ್ಥಳೀಯ ಆಟೋ ರಿಕ್ಷಾ ಗಳಲ್ಲಿ ಸುಳ್ಯ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.

ತೀವ್ರ ಗಾಯಗೊಂಡಿದ್ದ ಓರ್ವ ಮಹಿಳೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

LEAVE A REPLY

Please enter your comment!
Please enter your name here