ನೆಲ್ಯಾಡಿ: ಇಲ್ಲಿಗೆ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಜೂ.26ರಂದು ಬೆಳಿಗ್ಗೆ ಮತ್ತೆ ಗುಡ್ಡ ಕುಸಿತಗೊಂಡು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಉಂಟಾಗಿತ್ತು.
ಎರಡು ದಿನಗಳ ಹಿಂದೆ ಇಲ್ಲಿ ಗುಡ್ಡ ಜರಿದು ರಸ್ತೆಗೆ ಮಣ್ಣು ಬಿದ್ದಿತ್ತು. ಇದೀಗ ಜೂ.26ರಂದು ಬೆಳಿಗ್ಗೆ ಮತ್ತೆ ಮಣ್ಣು ಕುಸಿತಗೊಂಡು ಸುಮಾರು 2 ಗಂಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮಣ್ಣು ತೆರವುಗೊಳಿಸಿದ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ಮತ್ತೆ ಪುನರಾರಂಭಗೊಂಡಿದೆ.