ಉದನೆ: ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್,ರಕ್ಷಕ – ಶಿಕ್ಷಕ ಸಭೆ ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಾಗಾರ ಇತ್ತೀಚೆಗೆ ನಡೆಸಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ, ಮಾಜಿ ಸೈನಿಕರು,ನಿವೃತ್ತ ಪ್ರಾಂಶುಪಾಲರಾದ ಮ್ಯಾಥ್ಯೂ ಟಿ.ಜಿ ಮಾತನಾಡಿ, ಪ್ರತೀ ಮಗುವಿನ ಬೆಳವಣಿಗೆಯ ಹಂತಗಳು,ಆ ಸಂದರ್ಭದಲ್ಲಿ ಹೆತ್ತವರು ಮಗುವನ್ನು ಯಾವ ರೀತಿ ನಡೆಸಿಕೊಳ್ಳಬೇಕು,ಮನೆಯ ವಾತಾವರಣ ಮಗುವಿನ ಮೇಲೆ ಬೀರುವ ಪರಿಣಾಮ,ಇತ್ಯಾದಿ ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲಿದರು. ಬಳಿಕ ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಮೌಲ್ಯಗಳ ಮಹತ್ವ, ಕಲಿಕೆಯಲ್ಲಿ ಆಸಕ್ತಿ ಮೂಡಿಸುವ ಚಟುವಟಿಕೆಗಳು, ಅಭ್ಯಾಸ ಮಾಡುವ ವಿಧಾನ ಇತ್ಯಾದಿ ಹಲವು ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಿದರು.

ಈ ಸಭೆಯ ವೇದಿಕೆಯಲ್ಲಿ, ಸಂಸ್ಥೆಯ ಸಂಚಾಲಕರಾದ ರೆ.ಫಾ ಹನಿ ಜೇಕಬ್, ಮುಖ್ಯಗುರು ಸಿಬಿಚ್ಚನ್ ಟಿ.ಸಿ,ಶೈಕ್ಷಣಿಕ ಸಂಯೋಜಕರಾದ ಯಶೋಧರ ,ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷೆ ವಿಶಾಲಾಕ್ಷಿ ,ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು, ಪಾಲಕ- ಪೋಷಕರು,ಶಿಕ್ಷಕರು ಉಪಸ್ಥಿತರಿದ್ದರು.