ಪುತ್ತೂರು: ಸಂತ ಫಿಲೋಮಿನ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ನಶಾ ಮುಕ್ತ ಭಾರತ”ದ ಪ್ರತಿಜ್ಞಾವಿಧಿಯನ್ನು ಜೂ.26ರಂದು ಕೈಗೊಳ್ಳಲಾಯಿತು.
ವಿದ್ಯಾರ್ಥಿ ವೃಂದದವರು ಪ್ರಾರ್ಥನಾ ಗೀತೆಯನ್ನು ಹಾಡಿ, ಶಾಲಾ ಮುಖ್ಯೋಪಾಧ್ಯಾಯನಿಯಾದ ಭಗಿನಿ ಲೋರ ಪಾಯ್ಸ್ ರವರು ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು.

ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದಲ್ಲಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವಂತಹ ಪೋಸ್ಟರ್ ಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಯವರು ಪ್ರತಿಜ್ಞಾವಿಧಿಯನ್ನು ನೆರವೇರಿಸಿಕೊಟ್ಟರು. ವಿದ್ಯಾರ್ಥಿ ವೃಂದ ಹಾಗೂ ಶಿಕ್ಷಕ ವೃಂದದವರೆಲ್ಲರೂ ಈ ಪ್ರತಿಜ್ಞಾವಿಧಿಯಲ್ಲಿ ಪಾಲ್ಗೊಂಡರು.