ಕಾಣಿಯೂರು: ಕಾಣಿಯೂರು ಸ. ಹಿ.ಪ್ರಾ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳ ಸಾಗಣೆ ವಿರುದ್ದದ ಅಂತಾರಾಷ್ಟ್ರೀಯ ದಿನಾಚರಣೆಯ ಪ್ರಯುಕ್ತ “ನಶಾ ಮುಕ್ತ ಭಾರತ ಅಭಿಯಾನವು ಜೂ 26ರಂದು ನಡೆಯಿತು.
ಅಭಿಯಾನದ ಪ್ರಯುಕ್ತ ಮಕ್ಕಳಿಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯಗುರು ಬಾಲಕೃಷ್ಣರವರು ಪ್ರತಿಜ್ಞೆ ಬೋಧಿಸಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.