ಜೂ.28: ಕೊಳ್ತಿಗೆಯಲ್ಲಿ ಕಸಿ ಕಟ್ಟುವಿಕೆ, ಸಮಗ್ರ ಮಿಶ್ರಬೆಳೆ ಕೃಷಿ ಮಾಹಿತಿ ಕಾರ್ಯಾಗಾರ

0

ಪುತ್ತೂರು: ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರ್ಲಂಪಾಡಿ ಇದರ ವತಿಯಿಂದ ಕಸಿ ಕಟ್ಟುವಿಕೆ ಮತ್ತು ಸಮಗ್ರ ಮಿಶ್ರಬೆಳೆ ಬಗ್ಗೆ ಕೃಷಿ ತಜ್ಞರಿಂದ ಮಾಹಿತಿ ಕಾರ್ಯಗಾರ (ಕಾಳು ಮೆಣಸು ಮಿಶ್ರ ಬೆಳೆಯಾಗಿ ಅಡಿಕೆ ಹಾಗೂ ತೆಂಗು ತೋಟದಲ್ಲಿ ಸಮಗ್ರವಾಗಿ ಬೆಳೆಸುವ ಬಗ್ಗೆ) ಜೂ.28 ರಂದು ಬೆಳಿಗ್ಗೆ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತ ಸ್ನೇಹಿ ಸಭಾಭವನದಲ್ಲಿ ನಡೆಯಲಿದೆ.

ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ರೈ ಕೋರಂಗ ಕಾರ್ಯಕ್ರಮ ಉದ್ಘಾಟಿಸಲಿದ್ದು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ತೀರ್ಥಾನಂದ ದುಗ್ಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ನಿವೃತ್ತ ಪ್ರಧಾನ ವಿಜ್ಞಾನಿ ಡಾ| ಎನ್. ಯದುಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಲಿದ್ದಾರೆ.

ಕಾರ್ಯಕ್ರಮದಲ್ಲಿ ಕಸಿ ಕಟ್ಟುವಿಕೆ ಬಗ್ಗೆ ತರಬೇತಿ, ಯಂತ್ರ ಉಪಕರಣಗಳ ಮಾಹಿತಿ, ಪ್ರಾತ್ಯಕ್ಷಿಕೆ ನಡೆಯಲಿದೆ. ರೈತರು, ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೊಳ್ತಿಗೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ತೀರ್ಥಾನಂದ ದುಗ್ಗಳ, ಉಪಾಧ್ಯಕ್ಷ ಜನಾರ್ದನ ಗೌಡ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರಿಜಾ ಕೆ ಹಾಗೂ ಆಡಳಿತ ಮಂಡಳಿ ಸದಸ್ಯರ, ಸಿಬ್ಬಂದಿ ವರ್ಗದವರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here