
ಅರಿಯಡ್ಕ: ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಹಾಗೂ ತಾಲೂಕು ಯುವಜನ ಒಕ್ಕೂಟ (ರಿ.)ಪುತ್ತೂರು ಮತ್ತು ಶ್ರೀ ಕೃಷ್ಣ ಭಜನಾ ಮಂದಿರ (ರಿ.) ಕೌಡಿಚ್ಚಾರು ಇದರ ಸಹಯೋಗದೊಂದಿಗೆ ತಾಲೂಕು ಅತ್ಯುತ್ತಮ ಯುವ ಸಂಸ್ಥೆ ಪ್ರಶಸ್ತಿ ಪುರಸ್ಕೃತ ವಿವೇಕಾನಂದ ಯುವಕ ವೃಂದ (ರಿ.) ಕೌಡಿಚ್ಚಾರು ಅರಿಯಡ್ಕ ಇದರ ಆಶ್ರಯದಲ್ಲಿ 11 ನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶ್ರೀ ಕೃಷ್ಣ ಭಜನಾ ಮಂದಿರರದ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ವೃಂದದ ಅಧ್ಯಕ್ಷ ಉದಯ ಕುಮಾರ್ ಆಕಾಯಿ ವಹಿಸಿದ್ದರು. ಉದ್ಘಾಟಕರಾಗಿ ಗ್ರಾಮ ಪಂಚಾಯತ್ ಅರಿಯಡ್ಕ ಇದರ ಅಧ್ಯಕ್ಷರಾದ ಸಂತೋಷ್ ಕುಮಾರ್ ಕುತ್ಯಾಡಿ , ದೀಪಾ ಬೆಳಗಿಸಿ ಯೋಗಕ್ಕೆ ಚಾಲನೆ ನೀಡಿದರು.
ಮುಖ್ಯ ಅತಿಥಿಗಳಾಗಿ ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇದರ ಅಧ್ಯಕ್ಷ ರಾಮದಾಸ ರೈ ಮದ್ಲ, ಹಾಗೂ ಯುವಕ ವೃಂದದ ಸ್ಥಾಪಕಧ್ಯಕ್ಷ ಅಪ್ಪಯ್ಯ ನಾಯ್ಕ ಬಪ್ಪಪುಂಡೇಲು ,ಉಪಸ್ಥಿತರಿದ್ದು ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಯೋಗ ಶಿಕ್ಷಕ ನವೀನ್ ಕುಮಾರ್ ಕೆಯ್ಯೂರು ಯೋಗದ ಮಹತ್ವದ ಜೊತೆಗೆ 1 ಗಂಟೆಗಳ ಕಾಲ ಯೋಗ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಯುವಕ ವೃಂದದ ಪದಾಧಿಕಾರಿಗಳು,ಸದಸ್ಯರು ಹಾಗೂ ಸಾರ್ವಜನಿಕರು ಯೋಗ ತರಬೇತಿಯಲ್ಲಿ ಪಾಲ್ಗೊಂಡು ಪ್ರಯೋಜನ ಪಡೆದರು.
ಈ ಕಾರ್ಯಕ್ರಮವನ್ನು ದೀಪಕ್ ಕುಲಾಲ್ ಸ್ವಾಗತಿಸಿ, ವಸಂತ ಕುಲಾಲ್ ವಂದಿಸಿ, ಚರಣ್ ರಾಜ್ ಎಂ ಡಿ ಸ್ವಾಗತಿಸಿ ನೀರೂಪಿಸಿದರು.