ಜೂ.29: ವೀರಮಂಗಲದಲ್ಲಿ ಕೆಸರ್ ಡ್ ಗೊಬ್ಬುಲು

0

ಪುತ್ತೂರು: ವೀರಮಂಗಲದ ಆನಾಜೆಯ ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನದಿಂದ ಪ್ರಥಮ ವರ್ಷದ ಕೆಸರ್ ಡ್ ಗೊಬ್ಬುಲು ಕಾರ್ಯಕ್ರಮಗಳು ಜೂ.29ರಂದು ವೀರಮಂಗಲ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಬಳಿಯ ಗಂಡಿಗದ್ದೆಯಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ವೆಂಕಪ್ಪ ಪೂಜಾರಿ ಉದ್ಘಾಟಿಸಲಿದ್ದಾರೆ. ಮಹಾವಿಷ್ಣು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಹರೀಶ್ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಯೋಧ ಸುಂದರ ಗೌಡ ನಡುಬೈಲು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಪುರುಷರಿಗೆ ವಿವಿಧ ಮನೋರಂಜನಾತ್ಮಕ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ನಡೆಯಲಿದೆ ಎಂದು ಶ್ರೀ ಮಹಾವಿಷ್ಣು ಸೇವಾ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here