ಪುಣಚ: ಅಡ್ಯನಡ್ಕ ವಲಯದ ಕೇಪು ಅಂಗನವಾಡಿ ಕಾರ್ಯಕರ್ತೆ ನಿವೃತ್ತಿಗೊಂಡ ಸುಲೋಚನಾ ಹಾಗೂ ಅನಾರೋಗ್ಯದ ನಿಮಿತ್ತ ಅಂಗನವಾಡಿ ಹುದ್ದೆಗೆ ರಾಜೀನಾಮೆ ನೀಡಿದ ಕುಕ್ಕೆಬೆಟ್ಟು ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮೀದೇವಿ ಕುಕ್ಕೆಬೆಟ್ಟು ರವರನ್ನು ಜೂ.25ರಂದು ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸನ್ಮಾನಿಸಿ ಗೌರವಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿಶ್ವೇಶ್ವರ ಭಟ್ ಇವರ ಅಧ್ಯಕ್ಷತೆಯಲ್ಲಿ ಶಾಲು ಹಾಕಿ ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಟ್ಲ ಶಿಶು ಅಭಿವೃದ್ಧಿ ಯೋಜನೆಯ ಹಿರಿಯ ಮೇಲ್ವಿಚಾರಕಿ ಶಾರದ ಹಾಜರಿದ್ದು, ಕಾರ್ಯಕರ್ತೆಯರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ಸಂದರ್ಶಕಿ, ಕಿರಿಯ ಆರೋಗ್ಯ ಕಾರ್ಯಕರ್ತೆಯರು, ಕೇಪು ಹಾಗೂ ಪುಣಚ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.