ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಮಾಹಿತಿ ಕಾರ್ಯಾಗಾರ

0

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿ ಕಾರ‍್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಜೂ.26ರಂದು ಪುತ್ತೂರು ನಗರದ ಪೊಲೀಸ್ ಠಾಣೆಯ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.

ಕಾರ್ಯಕ್ರಮದಲ್ಲಿ ಪುತ್ತೂರು ನಗರದ ಪೊಲೀಸ್ ಠಾಣೆಯ Sub- Inspector ಆಂಜನೇಯ ರೆಡ್ಡಿ ಮಾತನಾಡಿ, ನಮ್ಮ ದೇಶದಲ್ಲಿ ಯುವ ಸಂಪತ್ತು ಬಹಳ ಮುಖ್ಯ ಆದುದರಿಂದ ಮೊದಲು ವ್ಯಸನಗಳಿಂದ ಮುಕ್ತರಾಗಬೇಕು ಎಂದರು.

A.S.I ಚಿದಾನಂದ ಪೈ ಮಾತನಾಡಿ, ಒಮ್ಮೆ ಮಾದಕ ವಸ್ತುಗಳನ್ನು ತೆಗೆದುಕೊಂಡರೆ ನಮ್ಮ ಎಲ್ಲಾ ಸುಖವನ್ನು ನಾಶಮಾಡುತ್ತದೆ. ನಮ್ಮ ಜೀವನದಲ್ಲಿ ಮಾತಾ-ಪಿತರು ಮತ್ತು ದೇಶಭಕ್ತಿ ಬಹಳ ಮುಖ್ಯ ಎಂದು ತಿಳಿಸಿದರು.

ಕಾರ‍್ಯಕ್ರಮದಲ್ಲಿ ಪುಟ್ಟಸ್ವಾಮಿ A.S.I , ದಿನೇಶ್ P.S.I., ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಎನ್. ಡಿ., ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ‍್ಯಕ್ರಮವನ್ನು ಆಂಗ್ಲ ಭಾಷಾ ಉಪನ್ಯಾಸಕಿ ರಾನಿಹ ನಿರೂಪಿಸಿದರು.

LEAVE A REPLY

Please enter your comment!
Please enter your name here