ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ

0

ಪುತ್ತೂರು:ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಾಗಾರ ಜೂ.26ರಂದು ನಡೆಯಿತು.

ಪುತ್ತೂರು ನಗರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಆಂಜನೇಯ ರೆಡ್ಡಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿ, ಮಕ್ಕಳು ಅತೀ ವೇಗವಾಗಿ ಮಾದಕವಸ್ತುಗಳಿಗೆ ಬಲಿಪಶುವಾಗುತ್ತಿದ್ದಾರೆ. ಆದ್ದರಿಂದ ಮಕ್ಕಳು ಆದಷ್ಟು ಮಾದಕ ವಸ್ತುಗಳಿಂದ ದೂರವಿರಬೇಕು. ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ, ಸೋಷಿಯಲ್ ಮೀಡಿಯಾದಿಂದ ದೂರವಾಗಿರಬೇಕು. ಮಕ್ಕಳು ಸಮಾಜಕ್ಕೆ ಮಾದರಿಯಾಗಬೇಕು. ಮಕ್ಕಳು ದುಷ್ಚಟಗಳಿಂದ ದೂರವಿರಲು ಏಕಾಗ್ರತೆ ಮತ್ತು ಒಳ್ಳೆಯ ವಿಷಯಗಳನ್ನು ಗ್ರಹಿಸಿ, ಪಾಠದ ಬಗ್ಗೆ ಹೆಚ್ಚು ಗಮನಹರಿಸಿಬೇಕು ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಬಿಟ್ ಪೋಲಿಸ್ ಸ್ಕರಿಯ, ಎ.ಎಸ್.ಐ ಶ್ರೀ ಕೃಷ್ಣಪ್ಪ, ವಿರೂಪಾಕ್ಷ, ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಉಪಸ್ಥಿತರಿದ್ದರು. ಶಿಕ್ಷಕಿ ಅನುರಾಧಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿರಾದ ಮಾಲಿನಿ ಶಾಂತಿ ಮತ್ತು ಜ್ಯೋತಿ.ಎಸ್ ಸಹಕರಿಸಿದರು.

LEAVE A REPLY

Please enter your comment!
Please enter your name here