ನಾಳೆ(ಜೂ.28) ಕುಂಬ್ರ ಜಂಕ್ಷನ್‌ನಲ್ಲಿ ಕಾಂಗ್ರೆಸ್ ಜನ ಜಾಗೃತಿ ಸಭೆ

0

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಮತ್ತು ಒಳಮೊಗ್ರು ಗ್ರಾಮ ವಲಯ ಕಾಂಗ್ರೆಸ್ ನ ಆಶ್ರಯದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರ ಮಾರ್ಗದಲ್ಲಿ ಬೃಹತ್ ಕಾಂಗ್ರೆಸ್ ಜನ ಜಾಗೃತಿ ಸಭೆಯು ಜೂ.28 ರಂದು ಸಂಜೆ ಕುಂಬ್ರ ಜಂಕ್ಷನ್ ನಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ಪುತ್ತೂರು ಶಾಸಕರು ಸೇರಿದಂತೆ ಜಿಲ್ಲೆಯ ಹಲವು ಮಂದಿ ನಾಯಕರು ಭಾಗವಹಿಸಲಿದ್ದಾರೆ. ಇದಲ್ಲದೆ ಜಿಲ್ಲೆಯ ಪ್ರಮುಖ ವಾಗ್ಮಿಗಳು ಭಾಗವಹಿಸಿ ಸಾರ್ವಜನಿಕರಿಗೆ ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಬಿಜೆಪಿ ಹರಡುತ್ತಿರುವ ಸುಳ್ಳಿನ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ ಆದ್ದರಿಂದ ಒಳಮೊಗ್ರು ಗ್ರಾಮದ ಮತದಾರ ಬಂಧುಗಳು, ಕಾಂಗ್ರೆಸ್ ಕಾರ್ಯಕರ್ತರು,ಜನ ನಾಯಕರುಗಳು ಸೇರಿದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಒಳಮೊಗ್ರು ಗ್ರಾಮ ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಳಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here