ಪುತ್ತೂರು:ಮಾಯಿದೆ ದೇವುಸ್ ಆಡಳಿತಕ್ಕೊಳಪಟ್ಟ ಸಂತ ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗೂ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಉತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ನಡೆಯುವ ಗಣೇಶೋತ್ಸವದ ವಿಗ್ರಹ ಮುಹೂರ್ತ ಜೂ.30 ರಂದು ಬೆಳಿಗ್ಗೆ ಪರ್ಲಡ್ಕ ಏಕದಂತ ವಠಾರದಲ್ಲಿ ನಡೆಯಲಿದೆ.
ವಿಗ್ರಹ ರಚನೆಕಾರರಾದ ತಾರಾನಾಥ ಆಚಾರ್ಯ ಹಾಗೂ ಮನೋಜ್ಞರವರ ನೇತೃತ್ವದಲ್ಲಿ ವಿಗ್ರಹ ರಚನೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಕಾರ್ಯಕ್ರಮ ಜರಗಲಿದೆ. ಈ ಸಂದರ್ಭದಲ್ಲಿ ಅಧಿಕ ಸಂಖ್ಯೆಯಲ್ಲಿ ಹಿರಿಯ ವಿದ್ಯಾರ್ಥಿ ಮಿತ್ರರು, ಸಂತ ಫಿಲೋಮಿನಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಬೇಕಾಗಿ ಸಂತ ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಗಣೇಶೋತ್ಸವ ಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.