ದಿವಾಕರ ದಾಸ್ ನೇರ್ಲಾಜೆ ರವರಿಂದ ಚಂದಳಿಕೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

0

ವಿಟ್ಲ: ಬಂಟ್ವಾಳ ತಾಲೂಕಿನ ಚಂದಳಿಕೆ ಹಿ.ಪ್ರಾ. ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈ.ಲಿ. ಮಾಲಕರಾದ ದಿವಾಕರ ದಾಸ್ ನೇರ್ಲಾಜೆರವರ ವತಿಯಿಂದ ಉಚಿತ ನೋಟ್ ಬುಕ್ ವಿತರಣೆ ನಡೆಯಿತು. ಕಳೆದ ಐದು ವರುಷಗಳಿಂದ ದಿವಾಕರ ದಾಸ್ ರವರ ವತಿಯಿಂದಾಗಿ ನಿರಂತರವಾಗಿ ಉಚಿತ ನೋಟ್ ಬುಕ್ ವಿತರಣೆ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಚಂದಳಿಕೆ ಹಿ.ಪ್ರಾ. ಶಾಲಾ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ , ಸದಸ್ಯರಾದ ಭಾರತ್ ಆಡಿಟೋರಿಯಂ ನ ಮಾಲಕರಾದ ಸಂಜೀವ ಪೂಜಾರಿ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ರವಿಪ್ರಕಾಶ್ ವಿಟ್ಲ, , ಪಟ್ಟಣ ಪಂಚಾಯತ್ ಸದಸ್ಯರಾದ ರಕ್ಷಿತಾ ಸನತ್, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಅಧ್ಯಕ್ಷರಾದ ಸುಮತಿ ದೇಜಪ್ಪ ನಿಡ್ಯ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ವಿಶ್ವನಾಥ ಗೌಡ ಸ್ವಾಗತಿಸಿದರು, ಸಹ ಶಿಕ್ಷಕಿ ರೇಷ್ಮಾ ಲೂವಿಸ್ ವಂದಿಸಿದರು, ದೈಹಿಕ ಶಿಕ್ಷಕ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು, ಸಹಶಿಕ್ಷಕಿಯರಾದ ಪ್ರಸನ್ನ, ರೆನಿಟಾ, ಪ್ರಿಯಾಂಕಾ ಸಹಕರಿಸಿದರು.

LEAVE A REPLY

Please enter your comment!
Please enter your name here