ಆಲಂಕಾರು: ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಪೀಕರ್ ಯು.ಟಿ.ಖಾದರ್ ಅವರು ಭೇಟಿ ನೀಡಿ ಜೀರ್ಣೋದ್ಧಾರ ಕೆಲಸ ಕಾರ್ಯವನ್ನು ವೀಕ್ಷಣೆ ಮಾಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹೇಮಂತ್ ರೈ ಮನವಳಿಕೆಗುತ್ತುರವರು ಯು.ಟಿ.ಖಾದರ್ರವರನ್ನು ಸ್ವಾಗತಿಸಿದರು.ದೇವಳದ ಅಭಿವೃದ್ಧಿಗೆ ಸಂಬಂಧಿಸಿ ಸ್ಪೀಕರ್ ಖಾದರ್ ಅವರು ಹಲವು ಸಲಹೆಗಳನ್ನು ನೀಡಿದರು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ರಾವ್ ನಗ್ರಿ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಪಡ್ಡಿಲ್ಲಾಯ,ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಾಧಾಕೃಷ್ಣ ರೈ ಪರಾರಿಗುತ್ತು, ಸೇಸಪ್ಪ ಪೂಜಾರಿ,ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಗಣೇಶ್ ಹಿರಿಂಜ,ಸದಾನಂದ ಕುಮಾರ್ ಮಡ್ಯೊಟ್ಟು,ಗುರುಪ್ರಸಾದ್ ಅಲೆಕ್ಕಿ, ವಿಜಯಕುಮಾರ್ ಕೆದಿಲ,ಕಾಂಗ್ರೆಸ್ ಪಕ್ಷದ ಪ್ರಮುಖರಾದ ಪೀರ್ ಮಹಮ್ಮದ್ ಸಾಹೇಬ್,ಅಬೂಬಕ್ಕರ್ ನೆಕ್ಕರೆ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.
ರಾಜ್ಯದ ಪ್ರಸಿದ್ಧ ಕ್ಷೇತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹೊರತುಪಡಿಸಿದರೆ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನ ಕಡಬ ತಾಲೂಕಿನಲ್ಲಿರುವ ಏಕೈಕ ಎ ಗ್ರೇಡ್ ದೇವಸ್ಥಾನವಾಗಿದ್ದು ಐತಿಹಾಸಿಕ ಹಿನ್ನಲೆ ಹೊಂದಿದ್ದು ಪ್ರಸ್ತುತ ಜೀರ್ಣೋದ್ಧಾರ ನಡೆಯುತ್ತಿದೆ