ಜೂ.29(ನಾಳೆ): ಇರ್ದೆ ದೇವಾಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

0

ನಿಡ್ಪಳ್ಳಿ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶ್ರೀ ವಿಷ್ಣು ಮೂರ್ತಿ ದೇವಾಲಯ ಶ್ರೀ ಗೋಪಾಲ ಕ್ಷೇತ್ರ ಇರ್ದೆ ಇದರ ಜಂಟಿ ಆಶ್ರಯದಲ್ಲಿ ಪ್ರಗತಿಬಂಧು ಸ್ವ-ಸ್ವಹಾಯ ಸಂಘಗಳ  ಒಕ್ಕೂಟ ದೂಮಡ್ಕ, ಪೇರಲ್ತಡ್ಕ, ಗುಮ್ಮಟೆಗದ್ದೆ, ಅಜ್ಜಿಕಲ್ಲು, ಅಜಲಡ್ಕ, ರೆಂಜ, ಕಕ್ಕೂರು, ಚೂರಿಪದವು ಇವುಗಳ ಸಹಕಾರದೊಂದಿಗೆ ರಾಧಾಕೃಷ್ಣ ಭಟ್ ಕಕ್ಕೂರು ಇವರ ಪೌರೋಹಿತ್ಯದಲ್ಲಿ  ನಡೆಯುವ 21ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಇರ್ದೆ ಶ್ರೀ ವಿಷ್ಣು ಮೂರ್ತಿ ದೇವಾಲಯದಲ್ಲಿ ಜೂ.29ರಂದು ನಡೆಯಲಿದೆ.

ಬೆಳಿಗ್ಗೆ ಗಂಟೆ 9ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here