ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ಹಾಗೂ ಸರಕಾರಿ ಪದವಿ ಪೂವ ಕಾಲೇಜು ಕಡಬ
ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗಾಗಿ ಮಾಹಿತಿ ಕಾರ್ಯಾಗಾರವು ಜೂನ್ 27 ರಂದು ಕಡಬ ಸರಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಜರಗಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯ ವಲಯಾಧ್ಯಕ್ಷರಾದ ಕರುಣಾಕರ ಗೋಗಟೆ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಂದೆ ತಾಯಿಗಳ ತ್ಯಾಗ, ಪ್ರೋತ್ಸಾಹದಿಂದ ಸಾಧನೆ ಮಾಡಿರುತ್ತಾರೆ. ತಮಗೋಸಕ್ಕರ ಸಮರ್ಪಿಸಿಕೊಂಡ ತಂದೆ ತಾಯಿ, ಶಿಕ್ಷಕರನ್ನು ಗೌರವದಿಂದ ಕಾಣುವ ಮನಸ್ಥಿತಿ ನಮ್ಮಲ್ಲಿ ಬೆಳೆಯಬೇಕು. ಆಗ ಮಾತ್ರ ನಾವು ಪಡಕೊಂಡ ಶಿಕ್ಷಣಕ್ಕೆ ಅರ್ಥ ಕಲ್ಪಿಸುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪುಣ್ಚಪ್ಪಾಡಿ ಸಮರ್ಥ ಜನಸೇವ ಟ್ರಸ್ಟ್ ನ ಅಧ್ಯಕ್ಷರಾದ ಗಿರಿಶಂಕರ ಸುಲಾಯ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದೊಂದಿಗೆ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಮಾಜದಲ್ಲಿ ಕಾಣುತ್ತಿರುವ ಮಾದಕ ವ್ಯಸನಕ್ಕೆ ಬಲಿಯಾದ ವ್ಯಕ್ತಿಗಳು ಯಾವ ಹಂತಕ್ಕೆ ತಲುಪುತ್ತಾರೆ ಎಂಬುದರ ಬಗ್ಗೆ ನಮಗೆಲ್ಲ ಅರಿವು ಇರುವುದರಿಂದ ಈ ದುಶ್ಟಟದಿಂದ ದೂರವಾಗಿ ಉತ್ತಮ ಜೀವನ ನಡೆಸಲು ವಿದ್ಯಾರ್ಥಿಗಳೆಲ್ಲ ಮನಸ್ಸು ಮಾಡಬೇಕು. ಆಗ ಮಾತ್ರ ನಮ್ಮ ಜೀವನಕ್ಕೆ ಅರ್ಥವಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಕಡಬ ಇದರ ಅಧ್ಯಕ್ಷರಾದ ಮಹೇಶ್ ಕೆ ಸವಣೂರು ಮಾತನಾಡಿ, ದುಶ್ಟಟಕ್ಕೆ ಬಲಿಯಾದವರು ಕೇವಲ ಒಬ್ಬ ವ್ಯಕ್ತಿ ಬಲಿಯಾಗದೇ ಇಡೀ ಸಂಸಾರವೇ ಬಲಿಯಾಗುತ್ತದೆ. ಕೇವಲ ಕ್ಷಣಿಕ ಆಸೆಗೋಸ್ಕರ ನಮ್ಮ ಜೀವನವನ್ನು ಹಾಳು ಮಾಡದೇ ಹಿರಿಯರು ಕಂಡ ಕನಸನ್ನು ನನಸು ಮಾಡಿಕೊಳ್ಳುವ ಪ್ರಾಮಾಣಿಕ ಪ್ರಯತ್ನವನ್ನು ಎಲ್ಲಾ ವಿದ್ಯಾರ್ಥಿಗಳು ಮಾಡಬೇಕು ಎಂದರು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಕಡಬ ಸರಕಾರಿ ಪದವಿ ಪೂರ್ವ ಕಾಲೇಜು ಇದರ ಪ್ರಾಂಶುಪಾಲರಾದ ಡಿ ದೇವರಾಜು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೇಯ ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಕಡಬ ಯುವಜನ ಒಕ್ಕೂಟದ ಅಧ್ಯಕ್ಷರಾದ ಶಿವಪ್ರಸಾದ್ ರೈ ಮೈಲೇರಿ, ಕಡಬ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ರಮೇಶ್ ರೈ ಅರ್ಪಾಜೆ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯೆ ಶ್ರೀಮತಿ ಸರೋಜಿನಿ ಆಚಾರ್ಯ ಶುಭಹಾರೈಸಿದರು. ಸೇವಾ ಪ್ರತಿನಿಧಿಗಳಾದ ಸವಿತಾ, ಸರಿತಾ, ನಳಿನಿ ಕಾರ್ಯಕ್ರಮದಲ್ಲಿಸಹಕರಿಸಿದರು. ಕಡಬ ವಲಯ ಮೇಲ್ವಿಚಾರಕಾದ ವಿಜೇಶ್ ಜೈನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಶ್ರೀಮತಿ ಲಾವಣ್ಯ ವಂದಿಸಿದರು.