ಅಗ್ನಿವೀರ್ ನೇಮಕಾತಿ ವಿದ್ಯಾರ್ಥಿಗಳಿಗೆ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಶುಭ ಹಾರೈಕೆ

0

ಪುತ್ತೂರು: ಭಾರತೀಯ ಸೇನೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ ಪ್ರತಿ ವರ್ಷದಂತೆ ಈ ವರ್ಷವು ಸೇನಾ ನೇಮಕಾತಿಗೆ ನುರಿತ ತಂಡದ ಮೂಲಕ ತರಬೇತಿಯನ್ನು ನೀಡುತ್ತಿದ್ದು, ಪ್ರಸಕ್ತ ಸಾಲಿನ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ, ಇದೀಗ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳ ತಂಡವನ್ನು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಅಭಿನಂದಿಸಿ, ಮಕ್ಕಳ ಉತ್ತಮ ಭವಿಷ್ಯಕ್ಕೆ ಶುಭ ಹಾರೈಸಿದರು.


ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಭವಿಷ್ಯದ ಸೇನಾ ಯೋಧರಾಗುವ ನಿಟ್ಟಿನಲ್ಲಿ ಪ್ರಾರ್ಥಿಸಿ, ಅರ್ಚಕರ ಮುಖೇನ ಗಂಧ ಪ್ರಸಾದ ನೀಡಲಾಯಿತು. ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಹಾಗೂ ಪತ್ನಿ, ತರಬೇತುದಾರೆ ರಮ್ಯಾ ಭಾಗ್ಯೇಶ್ ರೈ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದರು.


ಪಂಜಿಗುಡ್ಡೆ ಈಶ್ವರ ಭಟ್ ರವರು ವಿದ್ಯಾಮಾತಾ ಅಕಾಡೆಮಿಯ ಎಲ್ಲಾ ಸಮಾಜಮುಖಿ ಚಿಂತನೆಗಳ ಅತ್ಯುತ್ತಮ ಕೆಲಸಗಳಿಗೆ ಹಾಗೂ ಮುಖ್ಯವಾಗಿ ದೇಶ ಕಾಯುವ ಸೇನಾ ಯೋಧರನ್ನು ತಯಾರು ಮಾಡುವ ಒಳ್ಳೆಯ ಕೆಲಸಕ್ಕೆ ಸದಾ ಶ್ರೀ ಕ್ಷೇತ್ರದ ಹಾಗೂ ವೈಯಕ್ತಿಕ ನೆಲೆಯಲ್ಲಿ ಸಂಪೂರ್ಣ ರೀತಿಯ ಸಹಕಾರ ಸದಾ ಇರಲಿದೆಯೆಂದು ಹೇಳಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here