ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕೆದಂಬಾಡಿ ವಲಯ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ `ಬಿಜೆಪಿಯ ಸುಳ್ಳಿಗೆ ಉತ್ತರ’ ಎನ್ನುವ ಜನಜಾಗೃತಿ ಸಭೆ ಜೂ.29ರಂದು ತಿಂಗಳಾಡಿ ಜಂಕ್ಷನ್ನಲ್ಲಿ ನಡೆಯಲಿದೆ.
ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕೃಷ್ಣಪ್ರಸಾದ್ ಆಳ್ವ ಸಹಿತ ತಾಲೂಕು ಮತ್ತು ಜಿಲ್ಲಾ ಮಟ್ಟದ ನಾಯಕರು ಭಾಗವಹಿಸಲಿದ್ದಾರೆ ಎಂದು ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ ರೈ ಕೋರಿಕ್ಕಾರು ಹಾಗೂ ಪ್ರ.ಕಾರ್ಯದರ್ಶಿ ನೌಶಾದ್ ತಿಂಗಳಾಡಿ ತಿಳಿಸಿದ್ದಾರೆ.