ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ – ಶಿಕ್ಷಕ ಸಭೆ

0

ಈಶ್ವರಮಂಗಲ : ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025- 26ನೇ ಸಾಲಿನ ಪ್ರಥಮ ರಕ್ಷಕ – ಶಿಕ್ಷಕ ಸಭೆ ಜೂ.28ರಂದು ನಡೆಯಿತು .

ಸಂಪನ್ಮೂಲ ವ್ಯಕ್ತಿ ಸುಳ್ಯ ಪದವಿ ಪೂರ್ವ ವಿದ್ಯಾಲಯ ಉಪ ಪ್ರಾಂಶುಪಾಲ ಪ್ರಕಾಶ್ ಮೂಡತ್ತಾಯ ಮಾತನಾಡಿ, ವಿದ್ಯಾರ್ಥಿಗಳಿಗೆ ಸಣ್ಣವರಿರುವಾಗಲೇ ಸಂಸ್ಕಾರದ ಜೊತೆಗೆ ಮಾನವ ಸಂಬಂಧಗಳ ಅರಿವು ಮೂಡಿಸಬೇಕು. ಶಾಲೆಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಲ್ಲಿ ಮಕ್ಕಳನ್ನು ಭಾಗವಹಿಸಲು ಪ್ರೇರೇಪಿಸುವುದರ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಕಾರಣೀಕರ್ತರಾಗಬೇಕು ,ತನ್ಮೂಲಕ ನಾವು ಭವ್ಯ ಭಾರತವನ್ನು ಕಟ್ಟಲು ಸಹಕಾರಿಯಾಗೋಣ ಎಂದರು.


ಶಾಲಾ ಪ್ರಾಂಶುಪಾಲ ಕೆ ಶಾಮಣ್ಣ ಮಾತನಾಡಿ, ಶಿಕ್ಷಕರ ಮತ್ತು ಪೋಷಕರ ಸಹಕಾರದಿಂದ ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ಬೆಳೆಸಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ನನ್ಯ ಅಚ್ಚುತ್ತ ಮೂಡತ್ತಾಯರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಸಣ್ಣಪ್ರಾಯದಲ್ಲೇ ಉತ್ತಮ ಸಂಸ್ಕಾರ ಸಂಸ್ಕೃತಿ ಬೆಳೆಸಿಕೊಳ್ಳುವಂತೆ ಉತ್ತಮ ಶಿಕ್ಷಣ ನೀಡುತ್ತಿದ್ದೇವೆ ಎಂದರು.

ಅಬಾಕಸ್ ಶಿಕ್ಷಕಿ ಪ್ರಫುಲ್ಲಾ ಗಣೇಶ್ ಅಬಾಕಸ್ ಶಿಕ್ಷಣದ ಬಗ್ಗೆ ಮಾಹಿತಿ ನೀಡಿದರು. ಶಾಲಾ ಸಂಚಾಲಕ ಶಿವರಾಮ ಪಿ ಗ್ರಾಮೀಣ ಪರಿಸರದಲ್ಲಿರುವ ನಮ್ಮ ವಿದ್ಯಾ ಸಂಸ್ಥೆ ಉತ್ತಮ ರೀತಿಯಲ್ಲಿ ಶಿಕ್ಷಣ ನೀಡುತ್ತಾ ಬಂದಿದೆ ಎಂದರು.

ವೇದಿಕೆಯಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ನಹುಷ ,ನಾಗಪ್ಪ ಗೌಡ ಬೊಮ್ಮೆಟ್ಟಿ,ಜೈರಾಜ್ ರೈ, ಪ್ರವೀಣ್ ರೈ ಮೇನಾಲ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸೌಮ್ಯ ಎ ಸ್ವಾಗತಿಸಿ, ಶಿಕ್ಷಕಿ ರಾಜಶ್ರೀ ಪ್ರಾರ್ಥಿಸಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಡಿ ಕೆ ವಂದಿಸಿದರು. ಶಿಕ್ಷಕಿಯರಾದ ಪ್ರಸೀದಾ ಮತ್ತು ಮಾಲಿನಿ ನಿರೂಪಿಸಿದರು.

LEAVE A REPLY

Please enter your comment!
Please enter your name here