ದರ್ಬೆ ಲಿಟ್ಲ್ ಫ್ಲವರ್ ಶಾಲಾ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

0

ಪುತ್ತೂರು: ಶತಮಾನದ ಕಡೆಗೆ ಹೆಜ್ಜೆ ಇಟ್ಟಿರುವ, ಗುಣಾತ್ಮಕ ಶಿಕ್ಷಣಕ್ಕೆ ಹೆಸರಾಗಿ, ಕ್ರೀಡಾ ಕ್ಷೇತ್ರದ ಸಾಧನೆಗೆ ರಾಷ್ಟ್ರ ಮಟ್ಟದಲ್ಲಿ ಗುರುತಿಸಿರುವ, ಕನ್ನಡ ಮಾಧ್ಯಮ ಶಾಲೆಗಳಲ್ಲಿಯೇ ಅಗ್ರಗಣ್ಯ ಸಂಸ್ಥೆ ಯಾಗಿರುವ ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ ಜೂ.28ರಂದು ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್.ರವರ ಅಧ್ಯಕ್ಷತೆಯಲ್ಲಿ ಕಿರಿಯ ಪುಷ್ಪ ಸಭಾಂಗಣದಲ್ಲಿ ನೆರವೇರಿತು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಮಕುಂಜದ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲರು ಗಣರಾಜ ಕುಂಬ್ಳೆ ಮಾತನಾಡಿ, ಮಕ್ಕಳು ಮನೆಯ ಬೆಳಕು. ಆ ಬೆಳಕು ಸಮಾಜದ ಬೆಳಕಾಗಬೇಕಾದರೆ ಪೋಷಕರ ಸರಿಯಾದ ಮಾರ್ಗದರ್ಶನ ಅತ್ಯಗತ್ಯ. ಮಕ್ಕಳು ಮಾಡುವ ಸಣ್ಣ ಸಣ್ಣ ಒಳ್ಳೆಯ ಕೆಲಸಗಳಿಗೆ ಅಭಿನಂದಿಸಿ ಪ್ರೋತ್ಸಾಹ ದೊರೆತಾಗ ನಿಮ್ಮ ಮಕ್ಕಳು ಅದ್ಬುತ ಯಶಸ್ಸನ್ನು ಸಾಧಿಸುವರು ಎಂದರು.


ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಳೆದ ಎರಡು ವರ್ಷಗಳಿಂದ ಕ್ರೀಯಾಶೀಲವಾಗಿ ಕರ್ತವ್ಯ ನಿರ್ವಹಿಸಿದ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್ ಹಾಗೂ ಸುರಕ್ಷಾ ಸಮಿತಿ ಅಧ್ಯಕ್ಷ ಸತೀಶ್ ಆರ್.ರವರನ್ನು ಗೌರವಿಸಲಾಯಿತು.


ಶಿಕ್ಷಕಿ ಶಿವಪ್ರಿಯ ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕರಾದ ನಳಿನಾಕ್ಷಿ ವರದಿ ವಾಚಿಸಿದರು. ಜೋಸ್ಲಿನ್ ಪಾಯಸ್ ವಂದಿಸಿದರು. ಶಿಲ್ಪಾ, ಸಾತ್ವಿಕ, ಶಿವಪ್ರಿಯಾ ಹಾಗೂ ಸುಕನ್ಯ ಹೂ ನೀಡಿ ಅತಿಥಿಗಳನ್ನು ಸ್ವಾಗತಿಸಿದರು.


ರಕ್ಷಕ-ಶಿಕ್ಷಕ ಸಂಘ, ಸುರಕ್ಷಾ ಸಮಿತಿಗೆ ಆಯ್ಕೆ
ಮಹಾಸಭೆಯ ಬಳಿಕ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ನೂತನ ಉಪಾಧ್ಯಕ್ಷರಾಗಿ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿರುವ ವಿನಯ ಸುವರ್ಣ ಹಾಗೂ ಸುರಕ್ಷಾ ಸಮಿತಿ ಅಧ್ಯಕ್ಷರಾಗಿ ಚೇತನ್ ಮೊಟ್ಟೆತ್ತಡ್ಕ ಆಯ್ಕೆಯಾದರು. ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್ ನೇತೃತ್ವದಲ್ಲಿ ಅಧಿಕಾರ ಹಸ್ತಾಂತರ ನಡೆಯಿತು.

LEAVE A REPLY

Please enter your comment!
Please enter your name here