ಚಾರ್ವಾಕ ಕೋರಿಯಾನ ಗರಡಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ, ಉದ್ಯಮಿ ಕಿರಣ್ ಚಂದ್ರ ಡಿ, ಪುಷ್ಪಗಿರಿ ಭೇಟಿ

0

ಕಾಣಿಯೂರು: ಜೀರ್ಣೋದ್ಧಾರ ಕಾರ್ಯ ನಡೆಯುತ್ತಿರುವ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕೋರಿಯಾನ ಗರಡಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡರು, ಉದ್ಯಮಿ ಕಿರಣ್ ಚಂದ್ರ ಡಿ, ಪುಷ್ಪಗಿರಿ ಊರುವಾಳು, ಭೇಟಿ ನೀಡಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಟ್ರಸ್ಟ್ ಅಧ್ಯಕ್ಷರಾದ ಸತ್ಯನಾರಾಯಣ ಕಲ್ಲುರಾಯ, ಕಾರ್ಯದರ್ಶಿ ಬಾಲಕೃಷ್ಣ ರೈ ಕಾಸ್ಪಾಡಿಗುತ್ತು, ಟ್ರಸ್ಟಿನ ಉಪಾಧ್ಯಕ್ಷ ವಸಂತ ದಲಾರಿ, ಸ್ವಯಂ ಸೇವಕ ಸಮಿತಿ ಅಧ್ಯಕ್ಷ ನಂದನ್ ಕಜೆ, ಟ್ರಸ್ಟಿಗಳಾದ ಪ್ರಸನ್ನ ಅಭಿಕಾರ, ನಯನ ಕಲಾಯಿ, ಹಿರಿಯರಾದ ನಾರ್ಣಪ್ಪ ಗೌಡ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here