ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ‘ಪುರಾತತ್ವ ಶಾಸ್ತ್ರದ ಉತ್ಖನನ’ ಕುರಿತು ಚೇತನ ಕಾರ್ಯಕ್ರಮ

0

ಪುತ್ತೂರು: ನೆಹರುನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಇದೇ ಜೂನ್ 28ರಂದು ‘ಪುರಾತತ್ವ ಶಾಸ್ತ್ರದ ಉತ್ಖನನ’ ಎಂಬ ವಿಷಯದ ಬಗ್ಗೆ ‘ಚೇತನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನಿವೃತ್ತ ಎ ಎಸ್ ಐ ಆಫೀಸರ್ ರಾಮಚಂದ್ರ ಹೆಗ್ಡೆ ಅವರು ವಿದ್ಯಾರ್ಥಿಗಳಿಗೆ, ಪುರಾತತ್ವ ಶಾಸ್ತ್ರದ ಉತ್ಖನನದ ಅಗತ್ಯತೆ ಹಾಗೂ ಪುರಾತತ್ವ ತಜ್ಞರು ಮಾಡುವ ಕೆಲಸಗಳ ಬಗ್ಗೆ ಸೂಕ್ತ ಉದಾಹರಣೆಗಳೊಂದಿಗೆ ಮಾಹಿತಿ ನೀಡಿದರು.

ಉತ್ಖನನವು ನಮ್ಮ ಜ್ಞಾನವನ್ನು ವೃದ್ಧಿಸುತ್ತದೆ ಮತ್ತು ನಮ್ಮ ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಪ್ರಾಚೀನ ವಸ್ತುಗಳನ್ನು ಸಂರಕ್ಷಿಸುವುದರಿಂದ ಮುಂದಿನ ಪೀಳಿಗೆಗೆ ಇತಿಹಾಸವನ್ನು ತಿಳಿಯಲು ಸಹಾಯವಾಗುತ್ತದೆ. ಇದು ಮುಂದೆ ಸಂಸ್ಕೃತಿ ಮತ್ತು ಇತಿಹಾಸದ ಅಧ್ಯಯನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ಹಾಗೆಯೇ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಸೂಕ್ತವಾದ ಉತ್ತರವನ್ನು ನೀಡುವ ಮೂಲಕ ಮಾರ್ಗದರ್ಶನ ಮಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಭರತ್ ಪೈ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿನಿಯರಾದ ಆಪ್ತ ಚಂದ್ರಮತಿ ಮುಳಿಯ ಪರಿಚಯಿಸಿ, ನಿಧಿ ರೈ ಸ್ವಾಗತಿಸಿ, ಧನ್ಯಶ್ರೀ ನಿರೂಪಿಸಿ, ಆಯುಷಿ ಧನ್ಯವಾದ ಸಮರ್ಪಿಸಿದರು. ಶಾಲೆಯ ಶಿಕ್ಷಕ, ಶಿಕ್ಷಕಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here