ಪುತ್ತೂರು: ವಿವಿಧ ಸಂಘ ಸಂಸ್ಥೆಗಳ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಹಲವು ಸೌಲಭ್ಯಗಳನ್ನು ಕೊಡುಗೆಯಾಗಿ ಒದಗಿಸುವ ಮೂಲಕ ಜನಪ್ರಿಯತೆ ಗಳಿಸಿದ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ ಪುತ್ತೂರಾಯ ಸಹಿತ ನಾಲ್ವರು ವೈದ್ಯರು ವರ್ಗಾವಣೆಗೊಳ್ಳಲಿದ್ದಾರೆ.
ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ ಪುತ್ತೂರಾಯ ಅವರು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ, ಅರಿವಿಳಿಕೆ ತಜ್ಞೆ ಡಾ. ಜಯಕುಮಾರಿ ಅವರು ತುಮಕೂರು ಜಿಲ್ಲಾ ಆಸ್ಪತ್ರೆಗೆ, ದಂತ ತಜ್ಞ ಡಾ. ಜೈದೀಪ್ ಅವರು ಸಕಲೇಶಪುರ ತಾಲೂಕು ಆಸ್ಪತ್ರೆಗೆ, ಅರಿವಳಿಕೆ ತಜ್ಞೆ ಡಾ. ಶ್ವೇತಾ ಸುಳ್ಯ ಸರಕಾರಿ ಆಸ್ಪತ್ರೆಗೆ ವರ್ಗಾವಣೆಗೊಳ್ಳಲಿದ್ದಾರೆ.
ಇತ್ತೀಚೆಗಷ್ಟೆ ವೈದ್ಯರುಗಳ ವರ್ಗಾವಣೆ ಕುರಿತು ಕೌನ್ಸಿಲ್ ನಡೆದಿದ್ದು, ಅದರಲ್ಲಿ ವೈದ್ಯರ ಆಯ್ಕೆಗೆ ಸಂಬಂಧಿಸಿ ವರ್ಗಾವಣೆಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ವರ್ಗಾವಣೆ ಕುರಿತು ಇನ್ನಷ್ಟೆ ಅಧೀಕೃತ ಆದೇಶ ಬರಬೇಕಾಗಿದೆ.