ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಹಲವಾರು ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ. ದೇವಳಕ್ಕೆ ವಿವಿಧ ಸುವಸ್ತುಗಳ ಪೂರೈಕೆಗೆ ಸಹಕಾರ ನೀಡುವಂತೆ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ರಾಜ್ಯ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ ಮಾಡಿದರು.
ಮುಜರಾಯಿ ಸಚಿವರು ಜೂ.30 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ವೇಳೆ ಮಹಾಲಿಂಗೇಶ್ವರ ದೇವಳದ ವತಿಯಿಂದ ಅವರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಶ್ರೀ ದೇವರ ಪೊಟೋ ಸಹಿತ ಪ್ರಸಾದ ನೀಡಿ ಗೌರವಿಸಿದರು. ಬಳಿಕ ದೇವಳದ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ, ಸಾಮಾಜಿಕ ಮುಂದಾಲು ಲೋಕೇಶ್ ಗೌಡ ಪಡ್ಡಾಯೂರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉಪಸ್ಥಿತರಿದ್ದರು.