ಕೌಡಿಚ್ಚಾರು: ಬಿಜೆಪಿಯ ಸುಳ್ಳಿಗೆ ಉತ್ತರ ಜನಜಾಗೃತಿ ಸಭೆ

0

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ, ಅರಿಯಡ್ಕ ವಲಯ ಕಾಂಗ್ರೆಸ್ ಸಮಿತಿ ಮತ್ತು ಮಾಡ್ನೂರು ವಲಯ ಕಾಂಗ್ರೆಸ್ ಸಮಿತಿ ಜಂಟಿ ಆಶ್ರಯದಲ್ಲಿ ಬಿಜೆಪಿಯ ಸುಳ್ಳಿಗೆ ಉತ್ತರ ಜನಜಾಗೃತಿ ಸಭೆ ಕೌಡಿಚ್ಚಾರು ಜಂಕ್ಷನ್ ನಲ್ಲಿ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಪಾಲ್ಗೊಂಡು ಮಾತನಾಡಿದರು.

ಪುಡಾ ಅಧ್ಯಕ್ಷರಾದ ಅಮಳ ರಾಮಚಂದ್ರ, ಕಾಂಗ್ರೆಸ್ ಸಂಯೋಜಕರಾದ ಕಾವು ಹೇಮನಾಥ್ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಸಂತೋಷ್ ರೈ ಇಳಂತಾಜೆ, ರಾಜೀವ ರೈ ಕುತ್ಯಾಡಿ, ಮಾಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ ಇಬ್ರಾಹಿಂ, ಅರಿಯಡ್ಕ ವಲಯ ಕಾಂಗ್ರೆಸ್ ನ ಇಕ್ಬಾಲ್ ಹುಸೈನ್, ಶಿವರಾಮ ಮಣಿಯಾಣಿ ಕುರಿಂಜ, ಲತೀಫ್ ಕೌಡಿಚ್ಚಾರು, ಬಶೀರ್‍ ಕೌಡಿಚ್ಚಾರು, ಸಾರ್ಥಕ್ ರೈ ಅರಿಯಡ್ಕ, ಮಹಮ್ಮದ್ ಕುಂಞಿ ಕಾವು, ಅರಿಯಡ್ಕ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್ ಕಾವು, ಮೋನಪ್ಪ ಪೂಜಾರಿ ಕೆರೆಮಾರು, ದಿವ್ಯನಾಥ್ ಶೆಟ್ಟಿ ಕಾವು, ರವಿ ಪ್ರಸಾದ್ ಶೆಟ್ಟಿ,ಪ್ರದೀಪ್ ಕುಮಾರ್ ರೈ ಪಾಂಬಾರು ಸಹಿತ ಹಿರಿಯ ಕಾಂಗ್ರೆಸ್ ಕಾರ್ಯಕರ್ತರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಾಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷ ಕೆಕೆ ಇಬ್ರಾಹಿಂ ವಂದಿಸಿದರು. ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಇಕ್ಬಾಲ್ ಹುಸೈನ್ ಸ್ವಾಗತಿಸಿದರು.

LEAVE A REPLY

Please enter your comment!
Please enter your name here