ಪುತ್ತೂರು:ಪುತ್ತೂರು ಧಾನ್ಯದ ಸಹಕಾರಿ ಸಂಘದ 2025-30ನೇ ಅವಽಗೆ ನೂತನ ಅಧ್ಯಕ್ಷರಾಗಿ ಯು.ಪೂವಪ್ಪ ಮತ್ತು ಉಪಾಧ್ಯಕ್ಷರಾಗಿ ಲೋಕೇಶ್ ಹೆಗ್ಡೆಯವರು ಆಯ್ಕೆಗೊಂಡಿದ್ದಾರೆ.
ಜು.1ರಂದು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಬಳಿ ಸಂಘದ ಕಚೇರಿಯಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಚುನಾವಣಾಧಿಕಾರಿ ಶೋಭಾ ಎನ್.ಎಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನೂತನ ನಿರ್ದೇಶಕರಾಗಿ ಅಜಿತ್ ಕುಮಾರ್, ಕೆ.ಸಂಜೀವ ನಾಯಕ್ ಕಲ್ಲೇಗ, ಸಂತೋಷ್ ಕುಮಾರ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ನಹುಷ ಪಿ.ವಿ, ಯು.ಪೂವಪ್ಪ, ರಾಜೇಶ್ ಬನ್ನೂರು, ಜಯರಾಜ್, ಯು.ಲೋಕೇಶ್ ಹೆಗ್ಡೆ, ಸುಧಾನಾಗೇಶ್ ರಾವ್ ಮತ್ತು ಎಂ.ನಾರಾಯಣ ನಾಯ್ಕ್ ಅವಿರೋಧವಾಗಿ ಆಯ್ಕೆಗೊಂಡರು.ಬಳಿಕ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆಯಿತು.ನೂತನ ಆಡಳಿತ ಮಂಡಳಿಗೆ ಕಾರ್ಯದರ್ಶಿ ಯತೀಂದ್ರನಾಥ್ ಶುಭ ಹಾರೈಸಿದರು.