ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಾಧಕ ಹಿರಿಯ ವಿದ್ಯಾರ್ಥಿನಿ ವೈಭವಿ ಶೆಟ್ಟಿಗೆ ಸನ್ಮಾನ

0

ಪುತ್ತೂರು: ರಾಷ್ಟ್ರಮಟ್ಟದ ಪರೀಕ್ಷೆಯಾದ Joint Admission Test For Masters(JAM) ನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ವೈಭವಿ ಶೆಟ್ಟಿ  ರಾಷ್ಟ್ರ ಮಟ್ಟದಲ್ಲಿ 147ನೇ ರಾಂಕ್ ಹಾಗೂ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ. ಈ ಮೂಲಕ ಬೆಂಗಳೂರಿನಲ್ಲಿರುವ ಭಾರತದ ಶ್ರೇಷ್ಠ ಸಂಶೋಧನಾ ಹಾಗೂ ಉನ್ನತ ಶಿಕ್ಷಣ ಸಂಸ್ಥೆಯಾದ ಐಐಎಸ್ಸಿ ಯಲ್ಲಿ ಎಂ.ಎಸ್ಸಿ, ಪಿ.ಎಚ್.ಡಿ ತರಬೇತಿ ಪಡೆಯಲು ಆಯ್ಕೆಯಾಗಿರುತ್ತಾರೆ.

ಇವರನ್ನು ಕಾಲೇಜಿನ ವತಿಯಿಂದ  ಪ್ರಾಂಶುಪಾಲರಾದ ದೇವಿಚರಣ್  ರೈ ಎಂ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯ ಪೋಷಕರು ಉಪಸ್ಥಿತರಿದ್ದು ವಿದ್ಯಾರ್ಥಿನಿಗೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here