ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಮಾಹಿತಿ ಕಾರ್ಯಾಗಾರ

0

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ವಿದ್ಯಾರ್ಥಿಗಳಿಗೆ “ಪಿಯುಸಿ ಪರೀಕ್ಷಾ ಒಳನೋಟ” ಶೀರ್ಷಿಕೆಯಡಿ ಮೊದಲ ಉಪನ್ಯಾಸ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.


ಕಾರ್ಯಾಗಾರದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ  ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ಶೆಟ್ಟಿಗಾರ್‌, ದೇವಿಪ್ರಸಾದ್‌ ಹಾಗೂ ಉಷಾ ಎ ಎಂ ಇವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಬದಲಾದ ಪ್ರಶ್ನೆ ಪತ್ರಿಕೆಯ ಮಾದರಿ ಹಾಗೂ ಪರೀಕ್ಷೆಯ ತಯಾರಿಯ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here