ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿಯವರಿಗೆ ಕಸಾಪ ಕಡಬ ಘಟಕದಿಂದ ನುಡಿ ನಮನ

0

ರಾಮಕುಂಜ: ಇತ್ತೀಚೆಗೆ ನಿಧನರಾದ ನವೋದಯ ಕಾಲದ ಖ್ಯಾತ ಕವಿ, ಬರಹಗಾರ ಎಚ್.ಎಸ್.ವೆಂಕಟೇಶ್ ಮೂರ್ತಿಯವರಿಗೆ ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ವತಿಯಿಂದ ರಾಮಕುಂಜದಲ್ಲಿ ನಡೆದ ಕಸಾಪ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಲಾಯಿತು.


ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಅಧ್ಯಕ್ಷ ಕೆ.ಸೇಸಪ್ಪ ರೈ ಅವರು ನುಡಿ ನಮನ ಸಲ್ಲಿಸಿ, ಎಚ್.ಎಸ್.ವೆಂಕಟೇಶ್ ಮೂರ್ತಿ ಯವರು ಕನ್ನಡ ಸಾಹಿತ್ಯ ಕ್ಷೇತ್ರವನ್ನು ಹಳೆಯ ಸಂಪ್ರದಾಯದಲ್ಲಿ ಕೃಷಿ ಮಾಡಿ ಆಧುನಿಕ ಸಾಹಿತ್ಯದ ಕೃತಿಗಳನ್ನು ಸಾಹಿತ್ಯ ಪ್ರಿಯರಿಗೆ ಕೊಟ್ಟ ಮಹಾನ್ ಲೇಖಕರು. ಇವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಸಂತಾಪ ಸೂಚಿಸಿದರು.


ಕಾರ್ಯಕ್ರಮದಲ್ಲಿ ಕಸಾಪ ಕಡಬ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಹೋಬಳಿ ಅಧ್ಯಕ್ಷ ಪದ್ಮಪ್ಪ ಗೌಡ, ಗೌರವ ಕಾರ್ಯದರ್ಶಿಗಳಾದ ಎನ್.ಕೆ. ನಾಗರಾಜ್, ವಸಂತ್ ಕುಮಾರ್ ಡಿ, ಕೋಶಾಧಿಕಾರಿ ಬಾಲಚಂದ್ರ ಮುಚ್ಚಿಂತಾಯ, ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ, ಸದಸ್ಯರಾದ ವೆಂಕಟರಮಣ ಭಟ್, ಯಶವಂತ ರೈ, ಎ.ಎನ್ ಕೊಳಂಬೆ, ರಮೇಶ್ ಕೋಟೆ, ಪ್ರೇಮ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರ ಸಾಹಿತ್ಯ ಅಭಿಮಾನಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here