ಉಡುಪಿಯಲ್ಲಿ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಕುಂತೂರು ನಿವಾಸಿ ಮೃತ್ಯು

0


ಕಡಬ: ವಾರದ ಹಿಂದೆ ಉಡುಪಿಯಲ್ಲಿ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಡಬ ತಾಲೂಕಿನ ಕುಂತೂರು ಗ್ರಾಮದ ಅನ್ನಡ್ಕ ನಿವಾಸಿ ಸತ್ಯನಾರಾಯಣ(47ವ.)ರವರು ಚಿಕಿತ್ಸೆ ಫಲಕಾರಿಯಾಗದೆ ಜು.13ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.


ಸತ್ಯನಾರಾಯಣ ಅವರು ಉಡುಪಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು ಜು.9ರಂದು ಸಂಜೆ ಕೆಲಸ ಮುಗಿಸಿ ಬಸ್‌ಸ್ಟ್ಯಾಂಡ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿಯಾಗಿತ್ತು.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸತ್ಯನಾರಾಯಣ ಅವರು ಉಡುಪಿಯ ಬ್ರಹ್ಮಾವರ ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಜು.13ರಂದು ಮೃತಪಟ್ಟಿದ್ದಾರೆ. ಮೃತರು ತಂದೆ ಕೃಷ್ಣಪ್ಪ ಗೌಡ, ಪತ್ನಿ ಗೀತಾ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here