ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಕಾರ್ಯಕ್ರಮ ಜು.15ರಂದು ಇಚ್ಲಂಪಾಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಹೊರಠಾಣೆ ಹೆಡ್ಕಾನ್ಸ್ಸ್ಟೇಬಲ್ ಪ್ರವೀಣ್ ಕೆ.ಎಲ್. ಉದ್ಘಾಟಿಸಿ ಶುಭ ಹಾರೈಸಿದರು. ಅತಿಥಿಯಾಗಿ ಆಗಮಿಸಿದ್ದ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಎಸ್.ಗೌಡ ಇಚ್ಲಂಪಾಡಿ, ನೆಲ್ಯಾಡಿ ಶಾಖೆ ಉಪವಲಯ ಅರಣ್ಯಾಧಿಕಾರಿ ಕೆ.ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಡಬ ತಾಲೂಕಿನ ಕ್ಯಾಪ್ಟನ್ ಭವಾನಿ ಶಂಕರ್, ಮಾಸ್ಟರ್ ಪ್ರಶಾಂತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ನೆಲ್ಯಾಡಿ ವಲಯದ ವಲಯಾಧ್ಯಕ್ಷ ಕುಶಾಲಪ್ಪ ಗೌಡ ಶುಭ ಹಾರೈಸಿದರು. ನೆಲ್ಯಾಡಿ ಶಾಖೆ ಗಸ್ತು ಅರಣ್ಯ ಪಾಲಕ ದೇವಿಪ್ರಸಾದ್ ಶೌರ್ಯ ಸ್ವಯಂ ಸೇವಕರಿಗೆ ಮಾಹಿತಿ ನೀಡಿದರು.
ನೆಲ್ಯಾಡಿ ವಲಯದ ಮೇಲ್ವಿಚಾರಕ ಆನಂದ ಡಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಶೌರ್ಯದ ವಾರ್ಷಿಕ ವರದಿಯನ್ನು ಘಟಕ ಸಂಯೋಜಕಿ ನಮಿತಾ ಎಸ್ ಶೆಟ್ಟಿ ವಾಚಿಸಿದರು. ಘಟಕ ಸ್ವಯಂ ಸೇವಕಿ ಅಮಿತ ಸ್ವಾಗತಿಸಿ, ಇಚ್ಲಂಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ವೇದಾ ಪಿ.ವಂದಿಸಿದರು. ಕಾರ್ಯಕ್ರಮದಲ್ಲಿ ನೆಲ್ಯಾಡಿ ಶಾಖೆ ಅರಣ್ಯ ವೀಕ್ಷಕ ಡಿ.ಪಿ.ಜನಾರ್ದನ, ನೆಲ್ಯಾಡಿ ವಲಯ ಜನಜಾಗೃತಿ ವೇದಿಕೆ ಸದಸ್ಯ ತುಕಾರಾಮ ರೈ ಹೊಸಮನೆ, ನೆಲ್ಯಾಡಿ ವಲಯದ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು, ಸೇವಾ ಪ್ರತಿನಿಧಿಗಳು, ಇಚ್ಲಂಪಾಡಿ ಕಾರ್ಯಕ್ಷೇತ್ರದ ಪದಾಧಿಕಾರಿಗಳು, ಶೌರ್ಯ ಘಟಕದ ಸ್ವಯಂ ಸೇವಕರು ಭಾಗವಹಿಸಿದ್ದರು.
ಶೌರ್ಯ ಘಟಕದ ಸದಸ್ಯರಿಗೆ ಗೌರವಾರ್ಪಣೆ:
ಶೌರ್ಯ ಘಟಕದ ಸ್ವಯಂ ಸೇವಕರಿಗೆ ನೆಲ್ಯಾಡಿ ಒಕ್ಕೂಟದ ಸೇವಾಪ್ರತಿನಿಧಿ ಹೇಮಾವತಿ ಜೆ.ಯವರ ವತಿಯಿಂದ ಶಾಲು ಹಾಕಿ ಗೌರವಿಸಲಾಯಿತು. ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರ ವತಿಯಿಂದ ಮೊಬೈಲ್ ಕವರ್ ಹಾಗೂ ಕ್ಯಾಪ್ಗಳನ್ನು ಘಟಕದ ಸದಸ್ಯರಿಗೆ ವಿತರಿಸಲಾಯಿತು.