ಉಪ್ಪಿನಂಗಡಿ: ಇಳಂತಿಲ ಗ್ರಾ.ಪಂ. ಅಧ್ಯಕ್ಷ ಎಣ್ಮಾಡಿ ನಿವಾಸಿ ವಸಂತ ಶೆಟ್ಟಿ ಎಣ್ಮಾಡಿ (47) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬ್ರೈನ್ ಟ್ಯೂಮರ್ ರಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಇವರು ಇಳಂತಿಲದಲ್ಲಿ ಶ್ರೀ ಸಹಸ್ರ ಸೌಂಡ್ & ಲೈಂಟಿಂಗ್ಸ್ ಅನ್ನು ಹೊಂದಿದ್ದರು.