ಗೆಜ್ಜೆಗಿರಿಯ ಯಕ್ಷಗಾನ ಮಂಡಳಿ ಸಮಿತಿ ಪುನರ್ ರಚನೆ – ಮೇಳದ  ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ ಆಯ್ಕೆ

0

ಬಡಗನ್ನೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತಕ್ಕೆ ಒಳಪಟ್ಟ ಶ್ರೀ ಆದಿದುಮಾವತಿ, ದೇಯಿ ಬೈದೇತಿ ಕೋಟಿ ಚೆನ್ನಯ ಯಕ್ಷಗಾನ ಮಂಡಳಿಯ ಸಮಿತಿಯನ್ನು ಪುನರ್ ರಚನಾ ಸಭೆಯು ಜು.17ರಂದು ಮಂಗಳೂರಿನಲ್ಲಿ ನಡೆಯಿತು. ಗೌರವ ಸಂಚಾಲಕರಾಗಿ ಪ್ರಶಾಂತ ಪೂಜಾರಿ ಮಸ್ಕತ್, ಮುಖ್ಯ ಸಂಚಾಲಕರಾಗಿ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಪ್ರಮಲ್ ಕುಮಾರ್, ಸಂಚಾಲಕರಾಗಿ ಉಲ್ಲಾಸ್ ಕೋಟ್ಯಾನ್, ಹರೀಶ್ ಕೆ ಪೂಜಾರಿ, ಡಾ.ಸಂತೋಷ್ ಪೇರಂಪಲ್ಲಿ, ನಿತ್ಯಾನಂದ ನಾವರ ಅವರನ್ನು ಆಯ್ಕೆ ಮಾಡಲಾಯಿತು.

ಕ್ಷೇತ್ರದ ಗೌರವಾಧ್ಯಕ್ಷ ಪಿತಾಂಬರ ಹೇರಾಜೆ, ಗೆಜ್ಜೆಗಿರಿ ಕೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ  ಸಂಜೀವ ಪೂಜಾರಿ ಬಿರುವ ಸೆಂಟರ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಡಾ. ರಾಜಾರಾಮ್ ಕೆಬಿ, ಕೋಶಾಧಿಕಾರಿ  ಮೋಹನ್ ದಾಸ್ ಬಂಗೇರ ವಾಮಜೂರು, ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ನವೀನ್ ಅಮೀನ್ ಕಟಪಾಡಿ,  ನವೀನ್ ಸುವರ್ಣ ಸಜೀಪ, ಎಸ್ ಆರ್ ಶೈಲೇಂದ್ರ ಸುವರ್ಣ, ಜೈವಿಕ್ರಮ ಕಲ್ಲಾಪು, ಚಂದ್ರಶೇಖರ ಉಚ್ಚಿಲ, ಭಾಸ್ಕರ ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here