ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವೀಲ್‌ಚೇರ್ ವಿತರಣೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ಇಚ್ಲಂಪಾಡಿ ಕಾರ್ಯಕ್ಷೇತ್ರದ ಕೊರಮೇರು ಗ್ರಾಮದ ನಾಗಶ್ರೀ ಸಂಘದ ಸದಸ್ಯರ ಮನೆಯ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಿದ ವೀಲ್‌ಚೇರ್ ವಿತರಣೆ ನಡೆಯಿತು.

ದ.ಕ.ಜಿಲ್ಲಾ ನಿರ್ದೇಶಕ ಬಾಬು ನಾಯ್ಕ, ಒಕ್ಕೂಟದ ಅಧ್ಯಕ್ಷ ಚೆನ್ನಪ್ಪ ಗೌಡ, ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಒಕ್ಕೂಟದ ಉಪಾಧ್ಯಕ್ಷ ತನಿಯಪ್ಪರವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿ ಅಮಿತಾ, ವಲಯ ಮೇಲ್ವಿಚಾರಕ ಆನಂದ ಡಿ.ಬಿ., ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ, ಜೆವಿಕೆ ಸಮನ್ವಯಾಧಿಕಾರಿ ಚೇತನಾ, ಇಚ್ಲಂಪಾಡಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ವೇದಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here