ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂಡಳಿ ಹಾಗೂ ಯಕ್ಷಗಾನ ಕಲಾಕೂಟದ ವಾರ್ಷಿಕ ಮಹಾಸಭೆ

0

ಪುತ್ತೂರು: ಪೆರ್ಲಂಪಾಡಿ ಶ್ರೀ ಷಣ್ಮುಖದೇವ ಭಜನಾ ಮಂಡಳಿ ಹಾಗೂ ಯಕ್ಷಗಾನ ಕಲಾಕೂಟ ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಅಧ್ಯಕ್ಷರಾದ ಶ್ರೀನಿವಾಸ ಕೊಂರ್ಬಡ್ಕರವರ ಅಧ್ಯಕ್ಷತೆಯಲ್ಲಿ ಷಣ್ಮುಖದೇವ ಭಜನಾ ಮಂದಿರದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ 2025-26ನೇ ಸಾಲಿನ ನೂತನ ಸಮಿತಿಯನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಪ್ರವೀಣ್ ಜಿ.ಕೆ ಗೋಳಿತ್ತಡ್ಕ, ಕಾರ್ಯದರ್ಶಿಯಾಗಿ ಸತ್ಯಪ್ರಕಾಶ್ ಕುಂಟಿಕಾನ, ಖಜಾಂಜಿಯಾಗಿ ರವಿ ಕೊಂರ್ಬಡ್ಕ, ಉಪಾಧ್ಯಕ್ಷರಾಗಿ ಪ್ರೇಮ ಗಂಗಾಧರ ಪೆರ್ಲಂಪಾಡಿ, ಜೊತೆ ಕಾರ್ಯದರ್ಶಿಯಾಗಿ ಮಮತ ಮಾಧವ ನಾಯ್ಕ ಗೋಳಿತ್ತಡ್ಕರವರನ್ನು ಆಯ್ಕೆ ಮಾಡಲಾಯಿತು. ಈ‌ ಸಂದರ್ಭದಲ್ಲಿ ಭಜನಾ ಮಂದಿರದ ಪದಾಧಿಕಾರಿಗಳು, ಮಾಜಿ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here