ಕಡಬ: 52ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ರಚನೆ

0

ಅಧ್ಯಕ್ಷ: ವಿಶ್ವನಾಥ ರೈ, ಕಾರ್ಯದರ್ಶಿ:ಗಣೇಶ್

ಕಡಬ: ಇಲ್ಲಿನ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನಡೆಯುವ 52ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿಯ ಅಧ್ಯಕ್ಷರಾಗಿ ವಿಶ್ವನಾಥ ರೈ ಪೆರಿಯಡ್ಕ, ಕಾರ್ಯದರ್ಶಿಯಾಗಿ ಗಣೇಶ್ ದೊಡ್ಡಕೊಪ್ಪ ಆಯ್ಕೆಯಾಗಿದ್ದಾರೆ.


ಜತೆ ಕಾರ್ಯದರ್ಶಿಯಾಗಿ ಬಾಲಕೃಷ್ಣ ನೆಲ್ಲಿಪಡ್ಪು, ಉಪಾಧ್ಯಕ್ಷರಾಗಿ ಹರೀಶ್ ಅಗ್ರಶಾಲೆ, ಕೋಶಾಧಿಕಾರಿಯಾಗಿ ಪ್ರಸಾದ್ ಅಲುಂಗೂರು ಅವರು ಆಯ್ಕೆಯಾಗಿದ್ದಾರೆ. ಆಯ್ಕೆ ಸಭೆಯು ಇತ್ತೀಚೆಗೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here