ಪುತ್ತೂರು: ಲಯನ್ಸ್ ಕ್ಲಬ್ ಪುತ್ತೂರು ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನರಿಮೊಗರಿನಲ್ಲಿರುವ ಸರಸ್ವತಿ ವಿದ್ಯಾ ಮಂದಿರದಲ್ಲಿ ಶಾಲಾ ಅಧ್ಯಕ್ಷ ಅವಿನಾಶ್ ಕೊಡೆಂಕಿರಿಯವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.
ಲಯನ್ಸ್ ಕ್ಲಬ್ ಪುತ್ತೂರು ಅಧ್ಯಕ್ಷೆ ಪ್ರೇಮಲತಾ ರಾವ್ ಶುಭ ಹಾರೈಸಿದರು.ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಮುಖ್ಯೋಪಾಧ್ಯಾಯಿನಿ ಅಖಿಲ ಸ್ವಾಗತಿಸಿದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಅರವಿಂದ ಗವಾನ್, ಕೊಶಾಧಿಕಾರಿ ಸುಧಾಕರ್, ಲ.ಜಯಶ್ರೀ ಶೆಟ್ಟಿ, ಲ.ನಯನಾ ರೈ, ಲ.ವತ್ಸಲಾ ರಾಜ್ಞೆ, ಶಾಲಾ ಆಡಳಿತಾಧಿಕಾರಿ ಅವಿನಾಶ್ ಉಪಸ್ಥಿತರಿದ್ದರು. ಈ ಸಂದರ್ಬದಲ್ಲಿ ಕ್ಲಬ್ ವತಿಯಿಂದ ಸರಸ್ವತಿ ವಿದ್ಯಾ ಮಂದಿರಕ್ಕೆ ಧನ ಸಹಾಯ ನೀಡಲಾಯಿತು.