ಶಿರಾಡಿ ಘಾಟ್‌ನಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳ ನಡುವೆ ಡಿಕ್ಕಿ – 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

0

ನೆಲ್ಯಾಡಿ: ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಎರಡೂ ಬಸ್‌ಗಳಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ75ರ ಶಿರಾಡಿ ಘಾಟ್‌ನ ಮಾರನಹಳ್ಳಿ ಬಳಿ ಜು.24ರಂದು ನಡೆದಿದೆ.


ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಇನ್ನೊಂದು ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಮಾರನಹಳ್ಳಿ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಎರಡೂ ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಈ ಪೈಕಿ ಒಂದು ಬಸ್ಸಿನ ಚಾಲಕ ಸಹಿತ 8 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here