ಆ.15: ಭಕ್ತಕೋಡಿಯಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

0

ಸರ್ವೆ: ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ಹಾಗೂ ಶ್ರೀ ಗೌರಿ ಮಹಿಳಾ ಮಂಡಲ ಸರ್ವೆ ಇದರ ಸಂಯುಕ್ತ ಆಶ್ರಯದಲ್ಲಿ ಆ.15 ರಂದು ನಡೆಯುವ 24ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಕ್ತಕೋಡಿ ಎಸ್.ಜಿ.ಎಂ. ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.

ಯುವಕ ಮಂಡಲದ ಗೌರವ ಸಲಹೆಗಾರರಾಗಿರುವ ಡಾ. ಸೀತಾರಾಮ ಭಟ್ ಕಲ್ಲಮ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಯುವಕ ಮಂಡಲದ ಇನ್ನೋರ್ವ ಗೌರವ ಸಲಹೆಗಾರರಾಗಿರುವ ಶ್ರೀನಿವಾಸ್ ಹೆಚ್‌.ಬಿ, ಮಹಿಳಾ ಮಂಡಲದ ಗೌರವಾಧ್ಯಕ್ಷರಾಗಿರುವ ಮೋಹಿನಿ, ಯುವಕ ಮಂಡಲದ ಖಜಾಂಜಿ ಗುರುರಾಜ್ ಪಟ್ಟೆಮಜಲು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯುವಕ ಮಂಡಲದ ಕಾರ್ಯಕಾರಿ ಸಮಿತಿಯ ಸಂಚಾಲಕ ರಾಮಣ್ಣ ಪೂಜಾರಿ ಭಕ್ತಕೋಡಿ, ಕಾರ್ಯಕಾರಿ ಸಮಿತಿಯ ಸದಸ್ಯರಾಗಿರುವ ಸುರೇಶ್ ಎಸ್.ಡಿ, ಎಸ್.ಎಮ್ ಶರೀಫ್, ತಿಲಕ್ ರಾಜ್ ಕರುಂಬಾರು, ಕಮಲೇಶ್ ಎಸ್.ವಿ, ಯುವಕ ಮಂಡಲದ ಪದಾಧಿಕಾರಿಗಳಾಗಿದ ಮನೋಜ್ ಸುವರ್ಣ ಸೊರಕೆ, ಪ್ರಮೋದ್ ಕುಮಾರ್ ಅಲೇಕಿ, ಹರೀಶ್ ಅಲೇಕಿ, ಅಶೋಕ್ ಎಸ್.ಡಿ, ನಾಗೇಶ್ ಪಟ್ಟೆಮಜಲು ಉಪಸ್ಥಿತರಿದ್ದರು.

ಸ್ವಾಗತಿಸಿದ ಯುವಕ ಮಂಡಲದ ಅಧ್ಯಕ್ಷ ಗೌತಮ್ ರಾಜ್ ಕರುಂಬಾರು ಮಾತನಾಡಿ ನಮ್ಮ ಯುವಕ ಮಂಡಲದ ವತಿಯಿಂದ ಆ.15ರಂದು 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಭಕ್ತಕೋಡಿಯಲ್ಲಿ ವಿವಿಧ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದ್ದು ಈ ಬಾರಿಯೂ ಕೂಡ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಲು ಸಂಘಟಿತರಾಗಿದ್ದೇವೆ ಎಂದು ತಿಳಿಸಿದರು. ಯುವಕ ಮಂಡಲದ ಪ್ರಧಾನ ಕಾರ್ಯದರ್ಶಿ ಗೌತಮ್ ಪಟ್ಟೆಮಜಲು ವಂದಿಸಿದರು‌.

LEAVE A REPLY

Please enter your comment!
Please enter your name here