ನೆಹರುನಗರ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ ಆತ್ಮಹತ್ಯೆ

0

ಪುತ್ತೂರು: ನೆಹರುನಗರ ಕಲ್ಲೇಗ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ವಿಶ್ವಾಸ್ (40ವ) ಅವರು ಜು.28 ರಂದು ತನ್ನ ವೆಲ್ಡಿಂಗ್ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿರುವ ಕುರಿತು ವರದಿಯಾಗಿದೆ.


ಕಲ್ಲೇಗ ಗಣೇಶ್ ಬಾಗ್ ನಿವಾಸಿ ವಿಶ್ವಾಸ್ ಅವರು ಮನೆಯ ಬಳಿಯೇ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಉದ್ಯಮ ನಡೆಸುತ್ತಿದ್ದರು. ಮಧ್ಯಾಹ್ನದ ವೇಳೆ ಅವರು ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮೃತರ ಪತ್ನಿ ದಿವ್ಯ ಯಾನವಿ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ ದಿವ್ಯಾ ಯಾನವಿ, ಪುತ್ರಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here