ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಮತ್ತು ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಈ ವರ್ಷದ ಮೊದಲ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ – ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಜು.31ರಂದು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆಯಿತು.
ಮುಖ್ಯ ಅತಿಥಿಯಾಗಿ ಪುತ್ತೂರು ಸಂಚಾರ ಠಾಣೆಯ ಎಸ್ಐ ಉದಯ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಎಸ್ಐ ಚಿದಾನಂದ ರೈ ಮತ್ತು ಸಂಚಾರಿ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಅಭಿಯಾನದಲ್ಲಿ ಪುತ್ತೂರಿನ ಆಟೋ ಚಾಲಕರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಲಾಗಿದ್ದು, ರಸ್ತೆ ಸುರಕ್ಷತಾ ನಿಯಮಗಳ ಮಹತ್ವವನ್ನು ತಿಳಿಸಲು ಜಾಗೃತಿ ಮೂಡಿಸಲಾಯಿತು.
ರೋಟರಿ ಯುವ ಅಧ್ಯಕ್ಷ ಕುಸುಮ್ ರಾಜ್ ಸ್ವಾಗತಿಸಿ, ಕಾರ್ಯದರ್ಶಿ ಅಭೀಶ್ ವಂದಿಸಿದರು. ರೋಟರಿ ಸದಸ್ಯರಾದ ಸುದರ್ಶನ್ ರೈ, ಹರಿಪ್ರಸಾದ್ ರೈ, ಸಾಯಿರಾಂ ಮತ್ತು ಶಿವಪ್ರಕಾಶ್ ರವರು ಸಹಕಾರಿಸಿದರು. ಈ ಜನಜಾಗೃತಿ ಅಭಿಯಾನವು ಸಾರ್ವಜನಿಕರಲ್ಲಿ ಸುರಕ್ಷಿತ ಸಂಚಾರದ ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಭಾವಶಾಲಿ ಹೆಜ್ಜೆಯಾಗಿ ಪರಿಣಮಿಸಿದೆ.