ಪುತ್ತೂರು : ಸವಣೂರು ಸಮೀಪದ ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 16 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮವು ಆ.27 ರಂದು ಮುಕ್ಕೂರು ವಠಾರದಲ್ಲಿ ಜರುಗಲಿದೆ. ಇದರ ಆಮಂತ್ರಣ ಪತ್ರವನ್ನು ಮಾಜಿ ಸಂಸದ, ನಳಿನ್ ಕುಮಾರ್ ಕಟೀಲು ಅವರು ತಮ್ಮ ಕುಂಜಾಡಿ ನಿವಾಸದಲ್ಲಿ ಆ.2 ರಂದು ಬಿಡುಗಡೆಗೊಳಿಸಿದರು.
ಬಳಿಕ ಮಾತನಾಡಿದ ಅವರು ರಾಷ್ಟ್ರಭಕ್ತಿಯ ಪ್ರತೀಕದಂತಿರುವ ಗಣೇಶೋತ್ಸವವನ್ನು ಮುಕ್ಕೂರು ಪರಿಸರದಲ್ಲಿ ಅರ್ಥಪೂರ್ಣ ರೀತಿಯಲ್ಲಿ ಆಚರಿಸಲಾಗುತ್ತಿದೆ. ಈ ವರ್ಷ 16 ನೇ ವರ್ಷದ ಸಂಭ್ರಮದಲ್ಲಿದೆ. ಕಾರ್ಯಕ್ರಮವೂ ಸರ್ವರ ಒಗ್ಗೂಡುವಿಕೆಯೊಂದಿಗೆ ಅರ್ಥಪೂರ್ಣವಾಗಿ ಸಂಪನ್ನಗೊಳ್ಳಲಿ. ಮಾದರಿ ಕಾರ್ಯಕ್ರಮವಾಗಿ ಹತ್ತೂರಿಗೆ ಪಸರಿಸಲಿ ಎಂದರು.
ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ರಾಮಚಂದ್ರ ಚೆನ್ನಾವರ, ಮಾಜಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಜಯಂತ ಗೌಡ ಕುಂಡಡ್ಕ, ತಾರಾನಾಥ ಕುಂಡಡ್ಕ, ರಮೇಶ್ ಕಾನಾವು ಮೊದಲಾದವರು ಉಪಸ್ಥಿತರಿದ್ದರು.