ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಮತ್ತು ಸ.ಉ.ಹಿ.ಪ್ರಾ. ಶಾಲೆ ಕೆಮ್ಮಾಯಿ ಕೃಷ್ಣನಗರ ಇವರ ಸಹಯೋಗದಲ್ಲಿ ಆ.6ರಂದು ನಡೆದ ಚದುರಂಗ ಸ್ಪರ್ಧೆಯಲ್ಲಿ 14ರ ವಯೋಮಾನದ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ದತ್ತ ಚರಣ ಸಿ ಎಸ್ (7ನೇ), 17ರ ವಯೋಮಾನದ ಬಾಲಕರ ವಿಭಾಗದಲ್ಲಿ ವೈಭವ್ ಎಸ್ ಕೆ (9ನೇ), ಬಾಲಕಿಯರ ವಿಭಾಗದಲ್ಲಿ ಪಲ್ಲವಿ ಜಿ (10ನೇ) ಇವರು ಸ್ಪರ್ಧಿಸಿ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನಡೆಯಲಿರುವ ತಾಲೂಕು ಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ, ಶುಭಹಾರೈಸಿದ್ದಾರೆ.