ಪುತ್ತೂರು: ತಿಂಗಳಾಡಿ ಶ್ರೀ ಲಕ್ಷ್ಮೀ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಳ್ಳಿ ಸಂಪದ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.10ರಂದು ಅಪರಾಹ್ನ 2.30ಕ್ಕೆ ಸಹಕಾರಿಯ ಕೇಂದ್ರ ಕಛೇರಿ ತಿಂಗಳಾಡಿ ಶ್ರೀ ಲಕ್ಷ್ಮೀ ಸಂಕೀರ್ಣದ ಆವರಣದಲ್ಲಿ ನಡೆಯಲಿದೆ. ಸಹಕಾರಿಯ ಅಧ್ಯಕ್ಷ ಹರೀಶ ಪುತ್ತೂರಾಯರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಂಘದ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸಭೆಯ ಕಾರ್ಯಕಲಾಪಗಳಲ್ಲಿ ಭಾಗವಹಿಸುವಂತೆ ಆಡಳಿತ ಮಂಡಳಿಯ ಅನುಮತಿಯ ಮೇರೆಗೆ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರಾದ ಸುಷ್ಮಾ ಭಟ್ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.