ಬಡಗನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೇನಾಲ ಒಕ್ಕೂಟದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ಆ.9ರಂದು ಮೇನಾಲ ಶಾಲೆಯಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ರೈ ಮೇನಾಲ ನೇತೃತ್ವದಲ್ಲಿ ನಡೆಯಿತು.

ಮೇನಾಲ ಒಕ್ಕೂಟದ ಸೇವಾಪ್ರತಿನಿಧಿ ಸುಂದರ್ ಜಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ ಪಂ. ಉಪಾಧ್ಯಕ್ಷ ರಾಮ ಮೇನಾಲ, ಶಾಲಾ ಎಸ್ ಡಿಯಂಸಿ ಅಧ್ಯಕ್ಷ ಅಬ್ದುಲ್ಲ ಮೆಣಸಿನಕಾನ,ಮುಖ್ಯ ಶಿಕ್ಷಕಿ ಜಲಜ ಕೆ, ಸದಸ್ಯರಾದ ವೆಂಕಪ್ಪ ನಾಯ್ಕ ರವರು ಶುಭ ಹಾರೈಸಿದರು. ಶಾಲಾ ಶಿಕ್ಷಕ ವೃಂದ, ಅಕ್ಷರದಾಸೋಹ ಸಿಬ್ಬಂದಿಗಳು, ಶಿಕ್ಷಕ ವೃಂದದವರು, ಒಕ್ಕೂಟದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು, ಒಕ್ಕೂಟದ ನಿಕಟಪೂರ್ವ ಪದಾಧಿಕಾರಿಗಳು, ಸ್ವಸಹಾಯ ಸಂಘದ ಸದಸ್ಯರು ಮತ್ತು ಮಕ್ಕಳ ಪೋಷಕರು ಒಟ್ಟು ಸುಮಾರು 30 ಮಂದಿ ಸದಸ್ಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾಡು ಕಡಿಯುವ ಮೆಷಿನ್ ಗೆ ಪೆಟ್ರೋಲ್ ವ್ಯವಸ್ಥೆೆಯನ್ನು ಮಾಜಿ ಅಧ್ಯಕ್ಷ ಬಾಲಕೃಷ್ಣ ರೈ ರೂ.600/- ಮೊತ್ತ ವನ್ನು ನೀಡಲಾಯಿತು.
ಶಾಲಾ ಸಹ ಶಿಕ್ಷಕಿ ವಾಣಿ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಜಲಜ ವಂದಿಸಿದರು.